Uncategorized

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

ಅರಸಿನಮಕ್ಕಿ: ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯಲ್ಲಿ 5ರಿಂದ 9ನೇ ತರಗತಿ ಮಕ್ಕಳಿಗೆ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆಯು ಎ.10ರಂದು ನಡೆಯಿತು.

ಕಾರ್ಯಕ್ರಮವನ್ನು ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಅರ್ಚಕ ಉಲ್ಲಾಸ್ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಕಾಪು ಉಪ್ಪರಡ್ಕ ದೈವಸ್ಥಾನಗಳ ಸಮಿತಿ ಅಧ್ಯಕ್ಷ ಧರ್ನಪ್ಪ ಗೌಡ, ನಿಡ್ಲೆ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶರತ್ ತುಳಪುಳೆ, ನೇಲ್ಯಡ್ಕ ಶಾಲಾ ಮುಖ್ಯ ಶಿಕ್ಷಕ ಅರವಿಂದ ಗೋಖಲೆ, ಉದ್ಯಮಿ ಶ್ರೀರಂಗ ದಾಮ್ಲೆ ಉಪಸ್ಥಿತರಿದ್ದು, ಶುಭ ಹಾರೈಸಿದರು.


ಗಣೇಶ್ ಹೊಸ್ತೋಟ ಸ್ವಾಗತಿಸಿ, ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿದರು.

ಶಿಬಿರವು ಎ.10ರಿಂದ ಎ. 13 ರವರೆಗೆ ಬೆಳಗ್ಗೆ 9.00ರಿಂದ ಸಂಜೆ 5.00ರ ವರೆಗೆ ನಡೆಯಲಿದ್ದು, ಸಂಪೂರ್ಣ ಉಚಿತವಾಗಿದ್ದು ಯೋಗ, ಭಜನೆ. ಭಗವದ್ಗೀತೆ, ಪೌರಾಣಿಕ, ಐತಿಹಾಸಿಕ ಕಥೆಗಳು, ಪೇಪರ್ ಕ್ರಾಫ್ಟ್, ದೇಶಿಯ ಆಟಗಳು, ಗಿಡಮೂಲಿಕೆಗಳ ಪರಿಚಯ, ಉರಗ ತಜ್ಞರಿಂದ ಮಾಹಿತಿ, ಕಿರು ಅಧ್ಯಯನ ಪ್ರವಾಸ, ಆರೋಗ್ಯ ಸಲಹೆ ಮುಂತಾದ ಮಾಹಿತಿ ತರಬೇತಿಯನ್ನು ನೀಡಲಾಗುತ್ತದೆ.

Related posts

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಿಂದ ಚಿಕ್ಕಮಗಳೂರು ಜಿಲ್ಲೆಯ ಬೈರಾಪುರಕ್ಕೆ ಸಂಪರ್ಕ: ಶಿಶಿಲ- ಬೈರಾಪುರ ಘಾಟಿರಸ್ತೆಯ ಜಂಟಿ ಸ್ಥಳ ಸಮೀಕ್ಷೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಧರ್ಮಸ್ಥಳದ ಮೇಲೆ ಅಪಪ್ರಚಾರವನ್ನು ಸೃಷ್ಟಿಸಿರುವ ಮುಖವಾಡದ ಹಿಂದೆ ಇರುವ ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಿಬಿಐ ಅಥವಾ ಎನ್.ಐ.ಎ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಅಧ್ಯಕ್ಷ ಡಾ. ಸಂಪತ್ ಕುಮಾರ್ ಆಗ್ರಹ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!