25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು.

ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ. ಮೋಹನ್ ಕುಮಾರ್ ನೆರವೇರಿಸಿ ಗ್ರಾಮೀಣ ಪ್ರದೇಶದಲ್ಲಿ, ಪ್ರಶಾಂತವಾದ ವಾತಾವರಣದಲ್ಲಿರುವ ಇಂತಹ
ಶ್ರದ್ದಾ ಕೇಂದ್ರಗಳ ರಕ್ಷಣೆ ಮತ್ತು ಅಭಿವೃದ್ಧಿಯನ್ನು ನಾವುಗಳು ಮಾಡಿದಾಗ ಅದರ ಫಲ ಖಂಡಿತಾ ನಮಗೆ ಸಿಗುತ್ತದೆ. ನಾವೆಲ್ಲರೂ ಪ್ರಕೃತಿ ಆರಾಧಕರೂ. ಪ್ರಕೃತಿಯಲ್ಲಿ ದೇವರನ್ನು ಕಂಡವರು ಎಂದರು‌.

ಅಧ್ಯಕ್ಷತೆಯನ್ನು ಶ್ರೀ ಬಾಂಜಾರು ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ. ಕೃಷ್ಣಪ್ಪ ವಹಿಸಿ ಎಲ್ಲರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ವೆಂಕಟೇಶ್, ಮುಂಡಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್‌ ನಾರಾಯಣ ರಾವ್, ಬೆಳ್ತಂಗಡಿ ಮಲೆಕುಡಿಯರ ಸಂಘ ಅಧ್ಯಕ್ಷ ಶಿವರಾಂ ಎ, ಕೊರಗಪ್ಪ ಗೌಡ ಅರಣೆಪಾದೆ-ಚಾರ್ಮಾಡಿ ಉಪಸ್ಥಿತರಿದ್ದರು. ಸಮಿತಿ ಸದಸ್ಯರು ಸಹಕರಿಸಿದರು.

Related posts

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!