25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು.

ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ. ಮೋಹನ್ ಕುಮಾರ್ ನೆರವೇರಿಸಿ ಗ್ರಾಮೀಣ ಪ್ರದೇಶದಲ್ಲಿ, ಪ್ರಶಾಂತವಾದ ವಾತಾವರಣದಲ್ಲಿರುವ ಇಂತಹ
ಶ್ರದ್ದಾ ಕೇಂದ್ರಗಳ ರಕ್ಷಣೆ ಮತ್ತು ಅಭಿವೃದ್ಧಿಯನ್ನು ನಾವುಗಳು ಮಾಡಿದಾಗ ಅದರ ಫಲ ಖಂಡಿತಾ ನಮಗೆ ಸಿಗುತ್ತದೆ. ನಾವೆಲ್ಲರೂ ಪ್ರಕೃತಿ ಆರಾಧಕರೂ. ಪ್ರಕೃತಿಯಲ್ಲಿ ದೇವರನ್ನು ಕಂಡವರು ಎಂದರು‌.

ಅಧ್ಯಕ್ಷತೆಯನ್ನು ಶ್ರೀ ಬಾಂಜಾರು ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ. ಕೃಷ್ಣಪ್ಪ ವಹಿಸಿ ಎಲ್ಲರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ವೆಂಕಟೇಶ್, ಮುಂಡಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್‌ ನಾರಾಯಣ ರಾವ್, ಬೆಳ್ತಂಗಡಿ ಮಲೆಕುಡಿಯರ ಸಂಘ ಅಧ್ಯಕ್ಷ ಶಿವರಾಂ ಎ, ಕೊರಗಪ್ಪ ಗೌಡ ಅರಣೆಪಾದೆ-ಚಾರ್ಮಾಡಿ ಉಪಸ್ಥಿತರಿದ್ದರು. ಸಮಿತಿ ಸದಸ್ಯರು ಸಹಕರಿಸಿದರು.

Related posts

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!