September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು.

ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ. ಮೋಹನ್ ಕುಮಾರ್ ನೆರವೇರಿಸಿ ಗ್ರಾಮೀಣ ಪ್ರದೇಶದಲ್ಲಿ, ಪ್ರಶಾಂತವಾದ ವಾತಾವರಣದಲ್ಲಿರುವ ಇಂತಹ
ಶ್ರದ್ದಾ ಕೇಂದ್ರಗಳ ರಕ್ಷಣೆ ಮತ್ತು ಅಭಿವೃದ್ಧಿಯನ್ನು ನಾವುಗಳು ಮಾಡಿದಾಗ ಅದರ ಫಲ ಖಂಡಿತಾ ನಮಗೆ ಸಿಗುತ್ತದೆ. ನಾವೆಲ್ಲರೂ ಪ್ರಕೃತಿ ಆರಾಧಕರೂ. ಪ್ರಕೃತಿಯಲ್ಲಿ ದೇವರನ್ನು ಕಂಡವರು ಎಂದರು‌.

ಅಧ್ಯಕ್ಷತೆಯನ್ನು ಶ್ರೀ ಬಾಂಜಾರು ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ. ಕೃಷ್ಣಪ್ಪ ವಹಿಸಿ ಎಲ್ಲರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ವೆಂಕಟೇಶ್, ಮುಂಡಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್‌ ನಾರಾಯಣ ರಾವ್, ಬೆಳ್ತಂಗಡಿ ಮಲೆಕುಡಿಯರ ಸಂಘ ಅಧ್ಯಕ್ಷ ಶಿವರಾಂ ಎ, ಕೊರಗಪ್ಪ ಗೌಡ ಅರಣೆಪಾದೆ-ಚಾರ್ಮಾಡಿ ಉಪಸ್ಥಿತರಿದ್ದರು. ಸಮಿತಿ ಸದಸ್ಯರು ಸಹಕರಿಸಿದರು.

Related posts

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!