24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಧರ್ಮಸ್ಥಳ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” ಎಂಬ ಯೂಟ್ಯೂಬರ್ ಹರಿಬಿಟ್ಟಿದ್ದು, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಘನ ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟಿದ್ದ ಸಮೀರ್ ಎಂ.ಡಿ. ದೂತ ಎಂಬ ವ್ಯಕ್ತಿ ಹಾಗೂ ಯೂಟ್ಯೂಬ್ ಚಾನಲ್ ದೂತದ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಹತ್ತು ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಹೂಡಿದ್ದಾರೆ.

ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಹಾಗೂ ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಮಹತ್ವದ ಆದೇಶ ಮಾಡಿದ್ದಾರೆ.

Related posts

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!