ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವವು ತಹಸೀಲ್ದಾರ್ ಪ್ರಥ್ವಿ ಸಾನಿಕಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಬೆಳ್ತಂಗಡಿ ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್ ಭಾಗವಹಿಸಿದ್ದರು.

ಸಮಾರಂಭದಲ್ಲಿ ದೀಮತಿ ಮಹಿಳಾ ಸಮಾಜ ಉಜಿರೆ ಅಧ್ಯಕ್ಷೆ ಡಾ. ಪಿ ರಜತ ಶೆಟ್ಟಿ ಯವರು ಧಾರ್ಮಿಕ ಉಪನ್ಯಾಸ ನೀಡಿದರು ಬೆಳ್ತಂಗಡಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್ ವಿಜಯಕುಮಾರ್, ತಾಲೂಕಿನ ಇಲಾಖೆಯ ಇಲಾಖಾಧಿಕಾರಿಗಳು, ಸಮಾಜ ಬಾಂಧವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಜಯಾನಂದ ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಪರಮೇಶ್ ತಾಲೂಕು ಕಛೇರಿ ಇವರು ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ನಿರ್ಹಹಣೆ ಮಾಡಿದರು.

Related posts

ಬೆಳ್ತಂಗಡಿ: ಕುಣಿತ‌ ಭಜನಾ ತರಬೇತುದಾರರ ‌ತಂಡದ‌ “ಭಜೋರೆ‌ ಮಾರುತಿ‌” ನೂತನ‌‌ ಲಾಂಚನ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!