38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

ಕೊಕ್ಕಡ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ, ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರು ಇವರ ಸಹಯೋಗದಲ್ಲಿ 5ನೇ ತರಗತಿಯಿಂದ 9ನೇ ತರಗತಿಯ ಮಕ್ಕಳ ಬೇಸಿಗೆ ಶಿಬಿರವು ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಎ.10 ರಂದು ಆರಂಭಗೊಂಡಿದ್ದು ಉಜಿರೆಯ ಗಣೇಶ್ ಪ್ರಸಾದ್ ಮೋಟರ್ ಡ್ರೈವಿಂಗ್ ಸ್ಕೂಲ್ ನ ಮಾಲಕ ರಾಮದಾಸ್ ಭಂಡಾರ್ಕರ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕಿ ಮನೋರಮ, ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಶ್ರೀರಾಮ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಫಣಿರಾಜ್ ಜೈನ್ ಉಪಸ್ಥಿತರಿದ್ದರು.

ಚಂದ್ರಶೇಖರ ಪುತ್ತೂರು ರವರು ಪ್ರಾಚೀನ ಹಾಗೂ ಸಾಂಸ್ಕೃತಿಯ ಭಾರತ ಭೂಪಟ ಪರಿಚಯ, ರೇಣುಕಾ ಸುಧೀರ್ ರವರು ಕಥಾ ಅವಧಿ, ಪ್ರೊ. ಮಧೂರು ಮೋಹನ ಕಲ್ಲೂರಾಯರು ಗಮಕ ಪರಿಚಯ ಮತ್ತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ವಿದ್ಯಾರ್ಥಿಗಳ ಸರಸ್ವತಿ ವಂದನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಭವ್ಯ ಪಿ. ಡಿ. ಸ್ವಾಗತಿಸಿದರು. ಮೇಘಶ್ರೀ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು. ವಿಂದ್ಯಾ ಪಿ.ಎಸ್ ವಂದಿಸಿದರು.

ಶಿಬಿರವು ಏ. 14ರವರೆಗೆ ನಡೆಯಲಿದ್ದು, ಇಂದು (ಎ.11) 2 ನೇ ದಿನದ ಶಿಬಿರವನ್ನು ನಿವೃತ್ತ ಶಿಕ್ಷಕ ಕುಂಞಪ್ಪ ಗೌಡ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಸದಸ್ಯ ಶಾಂತಪ್ಪ ಮಡಿವಾಳ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya
error: Content is protected !!