September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

ಗುರುವಾಯನಕೆರೆ: ಇಲ್ಲಿಯ ಎನ್.ಇ.ಟಿ ನರ್ಸಿಂಗ್ ಕಾಲೇಜು (ನೀತಿ ಶಿಕ್ಷಣ ಟ್ರಸ್ಟ್‌ನ ಘಟಕ) ಮೊದಲ ಬ್ಯಾಚ್ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಎ.11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾದ ಉಜಿರೆ ಎಸ್.ಡಿ.ಎಂ ಹಾಸ್ಪಿಟಲ್ ನ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್ ರವರು ದೀಪ ಪ್ರಜ್ವಲಿಸಿ ಮಾತನಾಡಿದರು. ಉಜಿರೆ ಎಸ್.ಡಿ.ಎಂ ಹಾಸ್ಪಿಟಲ್ ನ ನರ್ಸಿಂಗ್ ಸೂಪರಿಂಡೆಂಟ್ ಶೆರ್ಲಿ ರವರು ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

ವೇದಿಕೆಯಲ್ಲಿ ನೀತಿ ಶಿಕ್ಷಣ ಟ್ರಸ್ಟ್‌ ಅಧ್ಯಕ್ಷ ಸಾಜಿ ಪಿ.ಆರ್, ಮ್ಯಾನೇಜಿ0ಗ್ ಟ್ರಸ್ಟಿ ನಿತೀಶ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ. ಮನು ಕೆ.ಜೆ ಜೋಸೆಫ್ ಪ್ರಮಾಣ ವಚನ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಡಾ. ಪ್ರವೀಣ್ ಕುಮಾರ್, ಸೌಮ್ಯ ಹೆಚ್.ಆರ್, ಡಾ. ಶ್ರೀಹರಿ, ಡಾ. ವಿದ್ಯಾ ಗೌರಿ, ಸೋಜು ಅಗಸ್ಟೀನ್ ಹಾಗೂ ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಿ.ಆರ್.ಒ ಶ್ರೀಮತಿ ಮಧುರಾ ಸ್ವಾಗತಿಸಿದರು.ಉಪನ್ಯಾಸಕರಾದ ಮೇರ್ಲಿ ನಿರೂಪಿಸಿ, ಪೂಜಾ ರವರು ಅತಿಥಿಯಾದ ಶೆರ್ಲಿ ರವರ ಪರಿಚಯವನ್ನು ಬೋಧಿಸಿ, ವಂದಿಸಿದರು.

Related posts

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಟೌನ್‌ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾದಲ್ಲಿ ಹಮ್ರಾ ವರ್’ದ ಬಾಲ ಮಾಸಿಕ ಚಂದಾ ಅಭಿಯಾನಕ್ಕೆ ಚಾಲನೆ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!