April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು.

ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ. ಮೋಹನ್ ಕುಮಾರ್ ನೆರವೇರಿಸಿ ಗ್ರಾಮೀಣ ಪ್ರದೇಶದಲ್ಲಿ, ಪ್ರಶಾಂತವಾದ ವಾತಾವರಣದಲ್ಲಿರುವ ಇಂತಹ
ಶ್ರದ್ದಾ ಕೇಂದ್ರಗಳ ರಕ್ಷಣೆ ಮತ್ತು ಅಭಿವೃದ್ಧಿಯನ್ನು ನಾವುಗಳು ಮಾಡಿದಾಗ ಅದರ ಫಲ ಖಂಡಿತಾ ನಮಗೆ ಸಿಗುತ್ತದೆ. ನಾವೆಲ್ಲರೂ ಪ್ರಕೃತಿ ಆರಾಧಕರೂ. ಪ್ರಕೃತಿಯಲ್ಲಿ ದೇವರನ್ನು ಕಂಡವರು ಎಂದರು‌.

ಅಧ್ಯಕ್ಷತೆಯನ್ನು ಶ್ರೀ ಬಾಂಜಾರು ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ. ಕೃಷ್ಣಪ್ಪ ವಹಿಸಿ ಎಲ್ಲರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ವೆಂಕಟೇಶ್, ಮುಂಡಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್‌ ನಾರಾಯಣ ರಾವ್, ಬೆಳ್ತಂಗಡಿ ಮಲೆಕುಡಿಯರ ಸಂಘ ಅಧ್ಯಕ್ಷ ಶಿವರಾಂ ಎ, ಕೊರಗಪ್ಪ ಗೌಡ ಅರಣೆಪಾದೆ-ಚಾರ್ಮಾಡಿ ಉಪಸ್ಥಿತರಿದ್ದರು. ಸಮಿತಿ ಸದಸ್ಯರು ಸಹಕರಿಸಿದರು.

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya
error: Content is protected !!