24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು.

ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ. ಮೋಹನ್ ಕುಮಾರ್ ನೆರವೇರಿಸಿ ಗ್ರಾಮೀಣ ಪ್ರದೇಶದಲ್ಲಿ, ಪ್ರಶಾಂತವಾದ ವಾತಾವರಣದಲ್ಲಿರುವ ಇಂತಹ
ಶ್ರದ್ದಾ ಕೇಂದ್ರಗಳ ರಕ್ಷಣೆ ಮತ್ತು ಅಭಿವೃದ್ಧಿಯನ್ನು ನಾವುಗಳು ಮಾಡಿದಾಗ ಅದರ ಫಲ ಖಂಡಿತಾ ನಮಗೆ ಸಿಗುತ್ತದೆ. ನಾವೆಲ್ಲರೂ ಪ್ರಕೃತಿ ಆರಾಧಕರೂ. ಪ್ರಕೃತಿಯಲ್ಲಿ ದೇವರನ್ನು ಕಂಡವರು ಎಂದರು‌.

ಅಧ್ಯಕ್ಷತೆಯನ್ನು ಶ್ರೀ ಬಾಂಜಾರು ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ. ಕೃಷ್ಣಪ್ಪ ವಹಿಸಿ ಎಲ್ಲರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ವೆಂಕಟೇಶ್, ಮುಂಡಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್‌ ನಾರಾಯಣ ರಾವ್, ಬೆಳ್ತಂಗಡಿ ಮಲೆಕುಡಿಯರ ಸಂಘ ಅಧ್ಯಕ್ಷ ಶಿವರಾಂ ಎ, ಕೊರಗಪ್ಪ ಗೌಡ ಅರಣೆಪಾದೆ-ಚಾರ್ಮಾಡಿ ಉಪಸ್ಥಿತರಿದ್ದರು. ಸಮಿತಿ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!