July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಏ.7 ರಂದು ಹಾಜರುಪಡಿಸಿ ಏ.11 ರವರೆಗೆ ಕಸ್ಟಡಿಗೆ ಪಡೆಯಲಾಗಿತ್ತು‌. ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ ಕಳುಹಿಸಲಾಗಿದೆ.

8-11-2021 ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ನಕ್ಸಲ್ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ. ಕೃಷ್ಣಮೂರ್ತಿ(50) ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿ(36)ಯನ್ನು ಬಂಧಿಸಿ ತ್ರಿಶೂರ್ ಜೈಲಿನಡಿಲಾಗಿತ್ತು. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ 53 ಪ್ರಕರಣ, ಸಾವಿತ್ರಿ ವಿರುದ್ಧ 22 ಪ್ರಕರಣ ತನಿಖೆಯಲ್ಲಿದೆ.

2012-2013 ರಲ್ಲಿ ನಡೆದ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಮನೆಯ ಅಂಗಳದಲ್ಲಿದ್ದ ಕಾರು, ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಯತಡ್ಕ ಗ್ರಾಮದಲ್ಲಿ ನಕ್ಸಲ್ ಬೆಂಬಲಿತ ಬ್ಯಾನರ್ ಹಾಕಿದ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಪೋಟಕ ಪತ್ತೆ ಪ್ರಕರಣದಲ್ಲಿ ಇಬ್ಬರನ್ನು ಬಾಡಿ ವಾರೆಂಟ್ ಮೂಲಕ ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಏ.7 ರಂದು ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ತನಿಖೆ ನಡೆಸಿದ್ದರು.

ಏ.11 ರಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಏ.11 ರಂದು ಬೆಳಗ್ಗೆ ಬೆಳ್ತಂಗಡಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್ಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಎಸ್ ಮುಂದೆ ಹಾಜರುಪಡಿಸಿದ್ದು.ನ್ಯಾಯಾಲಯ ವಾಪಸ್ ಕೇರಳದ ತ್ರಿಶೂರ್ ಜೈಲಿಗೆ ಕಳುಹಿಸಲು ಆದೇಶ ಮಾಡಿದ್ದು ಅದರಂತೆ ಇಬ್ಬರು ನಕ್ಸಲರನ್ನು ಬೆಳ್ತಂಗಡಿ ಪೊಲೀಸರು ಬಿಗಿ ಭದ್ರತೆಯಲ್ಲಿ ಕೇರಳಕ್ಕೆ ಪ್ರಯಾಣ ಬೆಳೆಸಿ ಸಂಜೆ ಹೊತ್ತಿಗೆ ಜೈಲಿಗೆ ಕಳುಹಿಸಲಾಗಿದೆ.

Related posts

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya
error: Content is protected !!