September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

ಮಚ್ಚಿನ: “ಮಾಯವಾಗುತ್ತಿದೆ ಮಚ್ಚಿನ ಗ್ರಾಮದ ನೆರೋಲ್ಪಲ್ಕೆ ಬಸ್ ತಂಗುದಾಣ…” ಹೌದು ಮಚ್ಚಿನ ಗ್ರಾಮದ ನೆರೋಲ್ಪಲ್ಕೆ ಯಲ್ಲಿ ಸುಮಾರು ವರ್ಷಗಳ ಹಿಂದೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಗೊಂಡಿದ್ದರೂ ಈಗ ಮಾತ್ರ ಅದು ಜನರಿಗೆ ಉಪಯೋಗಕ್ಕೆ ಇಲ್ಲದಂತಾಗಿದೆ.

ಬಿಸಿಲು, ಗಾಳಿ ಮಳೆಗೆ ಜನರು ಬಸ್ಸಿಗಾಗಿ ರಸ್ತೆ ಬದಿಯ ಮರದ ಅಡಿಯಲ್ಲಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣದ ಸುತ್ತವು ಗಿಡಗಂಟಿ ಪೊದೆಗಳಿಂದ ಮುತ್ತಿಹೋಗಿವೆ. ಈ ಬಸ್ ತಂಗುದಾಣಕ್ಕೆ ಹೋಗಲು ಸರಿಯಾದ ದಾರಿಯು ಇಲ್ಲ ಚರಂಡಿಗಳನ್ನು ತೆಗೆದು ಮೋರಿಯು ಹಾಕದೆ ಚರಂಡಿ ಹಾರಿ ಬಸ್ಸಿಗೆ ಓಡೋ ಸ್ಥಿತಿಯಲ್ಲಿದೆ. ಈ ಸ್ಥಳದಲ್ಲಿ ಸುತ್ತುಮುತ್ತಲು ಹಲವಾರು ಮನೆಗಳಿದ್ದು ಶಾಲಾ ಮಕ್ಕಳು ಬಸ್ಸಿಗಾಗಿ ರಸ್ತೆ ಬದಿಯಲ್ಲಿ ನಿಲ್ಲುವಂತ ಪರಿಸ್ಥಿತಿಯಲ್ಲಿದೆ. ಇನ್ನೇನು ಮಳೆಗಾಲ ಪ್ರಾರಂಭವಾದರೆ ಸಿಡಿಲು ಮಳೆಗೆ ರಸ್ತೆ ಬದಿಯಲ್ಲಿ ನಿಲ್ಲುವಂತಹ ಸ್ಥಿತಿಯಲ್ಲಿದೆ. ರಾತ್ರಿ ಹೊತ್ತು ಸರಿಯಾದ ದಾರಿದೀಪವು ಇಲ್ಲದೆ ಕತ್ತಲೆಯಲ್ಲಿ ಬಸ್ಸಿಗಾಗಿ ಕಾಯುವಂತಾಗಿದೆ. ಇನ್ನಾದರೂ ಜನಪ್ರತಿನಿಧಿಗಳು ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಬಸ್ ನಿಲ್ದಾಣದ ವ್ಯವಸ್ಥೆಯನ್ನು ಒದಗಿಸುವಂತೆ ಸ್ಥಳೀಯ ಗ್ರಾಮಸ್ಥರ ಆಗ್ರಹವಾಗಿದೆ.

ಈ ಭಾಗದ ಸಾರ್ವಜನಿಕ ಬಸ್ ನಿಲ್ದಾಣವು ಎಲ್ಲರಿಗೂ ಅವಶ್ಯವಾಗಿದೆ. ಆದರೆ ಬಸ್ ನಿಲ್ದಾಣಕ್ಕೆ ಹೋಗಲು ಸರಿಯಾದ ದಾರಿ ಇಲ್ಲ. ಬಸ್ ನಿಲ್ದಾಣಕ್ಕೆ ನಾಮಫಲಕ, ಲೈಟ್ ವ್ಯವಸ್ಥೆ ಇನ್ನಿತರ ಎಲ್ಲಾ ಸೌಕರ್ಯಗಳೊಂದಿಗೆ ಒಂದು ಸುಂದರ ಬಸ್ ನಿಲ್ದಾಣ ಮಾಡುವಂತೆ ನಮ್ಮೆಲ್ಲರ ಒತ್ತಾಯ.
-ಅನಂತಕೃಷ್ಣ ಭಟ್ ಕುಕ್ಕಿಲ

Related posts

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!