23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

ಮಿತ್ತಬಾಗಿಲು: ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವವು ಏ.10ರಂದು ನಡೆಯಿತು.

ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರಕ್ಕೆ 2022ನೇ ಸಾಲಿನ ಕಾರ್ಯದಕ್ಷತೆ ಹಾಗೂ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ ಬಂಟ್ವಾಳ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಎಸ್. ವಿಜಯ ಪ್ರಸಾದ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಎಸ್. ವಿಜಯ ಪ್ರಸಾದ್ ರವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಬಳಿಕ ಮಾತನಾಡಿದ ಅವರು 25 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಹಿರಿಯರ ಮಾರ್ಗದರ್ಶನದಲ್ಲಿ ಯುವ ಜನತೆ ನಡೆದುಕೊಂಡು ಹೋಗಬೇಕು, ಒಳ್ಳೆಯ ಸಂಘಟನೆಗಳನ್ನು ಮಾಡುವುದು ಸಮಾಜದ ಜವಾಬ್ದಾರಿ. ನಾವು ಸಮಾಜಕ್ಕೆ ಮತ್ತು ಪರಿಸರಕ್ಕೆ ಏನು ಕೊಡಬಹುದು ಎಂದು ತಿಳಿದು ಅದರ ಬಗ್ಗೆ ಮುಂದುವರೆದಾಗ ಪ್ರಗತಿಯ ಹಾದಿಯಲ್ಲಿ ಸಾಗಲು ಸಾಧ್ಯ, ಮಕ್ಕಳು ಪ್ರಯತ್ನ ಪಟ್ಟರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮ ಊರಿನಲ್ಲಿ ಸನ್ಮಾನ ತೆಗೆದುಕೊಳ್ಳಬೇಕಾದರೆ ಮುಖ್ಯ ಕಾರಣ ನನ್ನ ತಂದೆ- ತಾಯಿ ಎಲ್ಲರಿಗೂ ಒಂದಲ್ಲ ಒಂದು ರೀತಿ ಸಾಮರ್ಥ್ಯ ಇದೆ. ಆ ಸಾಮರ್ಥ್ಯವನ್ನು ನಾವು ಬಳಸಿಕೊಳ್ಳುವುದರಲ್ಲಿದೆ. ನನಗೆ ಕರ್ತವ್ಯವೇ ದೇವರು ನಂತರ ಉಳಿದದ್ದು ಎಂದು ನಂಬಿದ್ದೇನೆ. ನಾವು ಹೋದಲ್ಲಿಯೇ ನಮ್ಮ ಊರು ನನ್ನಿಂದ ಕಾನೂನು ರೀತಿಯ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತೇನೆ ಎಂದರು.

ವೇದಿಕೆಯಲ್ಲಿ ಶ್ರೀ ಗುರು ನಾರಾಯಣ ಸೇವಾ ಸಂಘದ ಕಾರ್ಯದರ್ಶಿ ಲೋಕೇಶ್ ಪೂಜಾರಿ ಕುಕ್ಕಾವು, ಕಲಶೋತ್ಸವ ಸಮಿತಿಯ ಅಧ್ಯಕ್ಷ ಮುಕುಂದ ಸುವರ್ಣ ಬಂಗಾಡಿ, ಗುರಿಕಾರರಾದ ವಿಠಲ ಪೂಜಾರಿ ಹೊಸಮನೆ, ಯುವ ವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷ ನಿತೇಶ್ ಅಡ್ಕದಕರೆ, ಕಾರ್ಯದರ್ಶಿ ಹರೀಶ್ ಮಾಲೂರು, ನಿರ್ದೇಶಕರಾದ ದಯಾನಂದ ಕಂಗಂತ್ಯಾರು, ವೆಂಕಪ್ಪ ಪೂಜಾರಿ ಮಾಲೂರು, ಸಚೀನ್ ನೂಜೋಡಿ, ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಭಗೀರಥ ಜಿ. ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಸುರೇಂದ್ರ ಬಂಗಾಡಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Related posts

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya
error: Content is protected !!