23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

ಮಿತ್ತಬಾಗಿಲು: ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವವು ಏ.10ರಂದು ನಡೆಯಿತು.

ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರಕ್ಕೆ 2022ನೇ ಸಾಲಿನ ಕಾರ್ಯದಕ್ಷತೆ ಹಾಗೂ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ ಬಂಟ್ವಾಳ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಎಸ್. ವಿಜಯ ಪ್ರಸಾದ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಎಸ್. ವಿಜಯ ಪ್ರಸಾದ್ ರವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಬಳಿಕ ಮಾತನಾಡಿದ ಅವರು 25 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಹಿರಿಯರ ಮಾರ್ಗದರ್ಶನದಲ್ಲಿ ಯುವ ಜನತೆ ನಡೆದುಕೊಂಡು ಹೋಗಬೇಕು, ಒಳ್ಳೆಯ ಸಂಘಟನೆಗಳನ್ನು ಮಾಡುವುದು ಸಮಾಜದ ಜವಾಬ್ದಾರಿ. ನಾವು ಸಮಾಜಕ್ಕೆ ಮತ್ತು ಪರಿಸರಕ್ಕೆ ಏನು ಕೊಡಬಹುದು ಎಂದು ತಿಳಿದು ಅದರ ಬಗ್ಗೆ ಮುಂದುವರೆದಾಗ ಪ್ರಗತಿಯ ಹಾದಿಯಲ್ಲಿ ಸಾಗಲು ಸಾಧ್ಯ, ಮಕ್ಕಳು ಪ್ರಯತ್ನ ಪಟ್ಟರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮ ಊರಿನಲ್ಲಿ ಸನ್ಮಾನ ತೆಗೆದುಕೊಳ್ಳಬೇಕಾದರೆ ಮುಖ್ಯ ಕಾರಣ ನನ್ನ ತಂದೆ- ತಾಯಿ ಎಲ್ಲರಿಗೂ ಒಂದಲ್ಲ ಒಂದು ರೀತಿ ಸಾಮರ್ಥ್ಯ ಇದೆ. ಆ ಸಾಮರ್ಥ್ಯವನ್ನು ನಾವು ಬಳಸಿಕೊಳ್ಳುವುದರಲ್ಲಿದೆ. ನನಗೆ ಕರ್ತವ್ಯವೇ ದೇವರು ನಂತರ ಉಳಿದದ್ದು ಎಂದು ನಂಬಿದ್ದೇನೆ. ನಾವು ಹೋದಲ್ಲಿಯೇ ನಮ್ಮ ಊರು ನನ್ನಿಂದ ಕಾನೂನು ರೀತಿಯ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತೇನೆ ಎಂದರು.

ವೇದಿಕೆಯಲ್ಲಿ ಶ್ರೀ ಗುರು ನಾರಾಯಣ ಸೇವಾ ಸಂಘದ ಕಾರ್ಯದರ್ಶಿ ಲೋಕೇಶ್ ಪೂಜಾರಿ ಕುಕ್ಕಾವು, ಕಲಶೋತ್ಸವ ಸಮಿತಿಯ ಅಧ್ಯಕ್ಷ ಮುಕುಂದ ಸುವರ್ಣ ಬಂಗಾಡಿ, ಗುರಿಕಾರರಾದ ವಿಠಲ ಪೂಜಾರಿ ಹೊಸಮನೆ, ಯುವ ವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷ ನಿತೇಶ್ ಅಡ್ಕದಕರೆ, ಕಾರ್ಯದರ್ಶಿ ಹರೀಶ್ ಮಾಲೂರು, ನಿರ್ದೇಶಕರಾದ ದಯಾನಂದ ಕಂಗಂತ್ಯಾರು, ವೆಂಕಪ್ಪ ಪೂಜಾರಿ ಮಾಲೂರು, ಸಚೀನ್ ನೂಜೋಡಿ, ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಭಗೀರಥ ಜಿ. ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಸುರೇಂದ್ರ ಬಂಗಾಡಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Related posts

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!