24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಧರ್ಮಸ್ಥಳ : ಇಲ್ಲಿಯ ಮುಳಿಕ್ಕಾರು ಬೈಲಿನ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತ್ತು.

ಎ.10 ರಂದು ಬೆಳಿಗ್ಗೆ ಮುಳಿಕ್ಕಾರು ನಿಡ್ಲೆ ಮಧ್ಯೆ ಮಾಡಾಂಗಳ್ ಎಂಬಲ್ಲಿ ಹರಿಯುತ್ತಿರುವ ಸಂಪಿಗೆ ನದಿ ಮದ್ಯದಲ್ಲಿರುವ ಬೆರ್ಮೆರ್ ( ನಾಗ ಬ್ರಹ್ಮ) ಸಾನಿಧ್ಯ ದಲ್ಲಿ ನಾಗ ಬ್ರಹ್ಮದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ನಂತರ ಕಲ್ಲಾಜೆ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಪಿಗೆ ನದಿ ತಟದಲ್ಲಿ ವನ ಭೋಜನ ನಡೆಯಿತು. ರಾತ್ರಿ 9 ಗಂಟೆಗೆ ಕಲ್ಲಾಜೆ ಶ್ರೀ ಪಿಲಿ ಚಾಮುಂಡಿ ದೈವಸ್ಥಾನದಿಂದ ದೈವಗಳ ವೈಭವದ ಭಂಡಾರ ಹೊರಟು ಕಾಡಿನ ಮದ್ಯೆ ಇರುವ ನೆಲ್ಲಿಕಟ್ಟೆ ಎಂಬಲ್ಲಿ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಗ್ರಾಮದ ಗುತ್ತಿನರಾರಾರು ಸೇರಿದಂತೆ ದೈವಸ್ಥಾನ ಸಮಿತಿ ಸರ್ವ ಸದಸ್ಯರು, ಊರ ಪ್ರಮುಖರು, ಹಾಗೂ ಊರ, ಪರವೂರ ಭಕ್ತ ಭಾಂದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya
error: Content is protected !!