July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಧರ್ಮಸ್ಥಳ : ಇಲ್ಲಿಯ ಮುಳಿಕ್ಕಾರು ಬೈಲಿನ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತ್ತು.

ಎ.10 ರಂದು ಬೆಳಿಗ್ಗೆ ಮುಳಿಕ್ಕಾರು ನಿಡ್ಲೆ ಮಧ್ಯೆ ಮಾಡಾಂಗಳ್ ಎಂಬಲ್ಲಿ ಹರಿಯುತ್ತಿರುವ ಸಂಪಿಗೆ ನದಿ ಮದ್ಯದಲ್ಲಿರುವ ಬೆರ್ಮೆರ್ ( ನಾಗ ಬ್ರಹ್ಮ) ಸಾನಿಧ್ಯ ದಲ್ಲಿ ನಾಗ ಬ್ರಹ್ಮದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ನಂತರ ಕಲ್ಲಾಜೆ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಪಿಗೆ ನದಿ ತಟದಲ್ಲಿ ವನ ಭೋಜನ ನಡೆಯಿತು. ರಾತ್ರಿ 9 ಗಂಟೆಗೆ ಕಲ್ಲಾಜೆ ಶ್ರೀ ಪಿಲಿ ಚಾಮುಂಡಿ ದೈವಸ್ಥಾನದಿಂದ ದೈವಗಳ ವೈಭವದ ಭಂಡಾರ ಹೊರಟು ಕಾಡಿನ ಮದ್ಯೆ ಇರುವ ನೆಲ್ಲಿಕಟ್ಟೆ ಎಂಬಲ್ಲಿ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಗ್ರಾಮದ ಗುತ್ತಿನರಾರಾರು ಸೇರಿದಂತೆ ದೈವಸ್ಥಾನ ಸಮಿತಿ ಸರ್ವ ಸದಸ್ಯರು, ಊರ ಪ್ರಮುಖರು, ಹಾಗೂ ಊರ, ಪರವೂರ ಭಕ್ತ ಭಾಂದವರು ಉಪಸ್ಥಿತರಿದ್ದರು.

Related posts

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!