25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಧರ್ಮಸ್ಥಳ : ಇಲ್ಲಿಯ ಮುಳಿಕ್ಕಾರು ಬೈಲಿನ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತ್ತು.

ಎ.10 ರಂದು ಬೆಳಿಗ್ಗೆ ಮುಳಿಕ್ಕಾರು ನಿಡ್ಲೆ ಮಧ್ಯೆ ಮಾಡಾಂಗಳ್ ಎಂಬಲ್ಲಿ ಹರಿಯುತ್ತಿರುವ ಸಂಪಿಗೆ ನದಿ ಮದ್ಯದಲ್ಲಿರುವ ಬೆರ್ಮೆರ್ ( ನಾಗ ಬ್ರಹ್ಮ) ಸಾನಿಧ್ಯ ದಲ್ಲಿ ನಾಗ ಬ್ರಹ್ಮದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ನಂತರ ಕಲ್ಲಾಜೆ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಪಿಗೆ ನದಿ ತಟದಲ್ಲಿ ವನ ಭೋಜನ ನಡೆಯಿತು. ರಾತ್ರಿ 9 ಗಂಟೆಗೆ ಕಲ್ಲಾಜೆ ಶ್ರೀ ಪಿಲಿ ಚಾಮುಂಡಿ ದೈವಸ್ಥಾನದಿಂದ ದೈವಗಳ ವೈಭವದ ಭಂಡಾರ ಹೊರಟು ಕಾಡಿನ ಮದ್ಯೆ ಇರುವ ನೆಲ್ಲಿಕಟ್ಟೆ ಎಂಬಲ್ಲಿ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಗ್ರಾಮದ ಗುತ್ತಿನರಾರಾರು ಸೇರಿದಂತೆ ದೈವಸ್ಥಾನ ಸಮಿತಿ ಸರ್ವ ಸದಸ್ಯರು, ಊರ ಪ್ರಮುಖರು, ಹಾಗೂ ಊರ, ಪರವೂರ ಭಕ್ತ ಭಾಂದವರು ಉಪಸ್ಥಿತರಿದ್ದರು.

Related posts

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya
error: Content is protected !!