July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ಏ. 20ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ
ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಮಚ್ಚಿನದಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಕೋರಬೆಟ್ಟು, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಗ್ರಾಮ ಸಮಿತಿ ಮಾಜಿ ಅಧ್ಯಕ್ಷ ಸತೀಶ್ ಕರಂದೂರು, ಪಕ್ಷದ ಪ್ರಮುಖರಾದ ನಾರಾಯಣ ಪೂಜಾರಿ ಮಧುರ ನಿವಾಸ, ಪಕ್ಷದ ಪ್ರಮುಖರಾದ ವಿನಯಚಂದ್ರ ಗೌಡ ಹಟತ್ತೋಡಿ ಕೇಶವ ಪಾಲಡ್ಕ, ಹಾಗೂ ಪಕ್ಷದ ಗ್ರಾಮ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya
error: Content is protected !!