July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

ಗುರುವಾಯನಕೆರೆ: ಇಲ್ಲಿಯ ಎನ್.ಇ.ಟಿ ನರ್ಸಿಂಗ್ ಕಾಲೇಜು (ನೀತಿ ಶಿಕ್ಷಣ ಟ್ರಸ್ಟ್‌ನ ಘಟಕ) ಮೊದಲ ಬ್ಯಾಚ್ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಎ.11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾದ ಉಜಿರೆ ಎಸ್.ಡಿ.ಎಂ ಹಾಸ್ಪಿಟಲ್ ನ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್ ರವರು ದೀಪ ಪ್ರಜ್ವಲಿಸಿ ಮಾತನಾಡಿದರು. ಉಜಿರೆ ಎಸ್.ಡಿ.ಎಂ ಹಾಸ್ಪಿಟಲ್ ನ ನರ್ಸಿಂಗ್ ಸೂಪರಿಂಡೆಂಟ್ ಶೆರ್ಲಿ ರವರು ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

ವೇದಿಕೆಯಲ್ಲಿ ನೀತಿ ಶಿಕ್ಷಣ ಟ್ರಸ್ಟ್‌ ಅಧ್ಯಕ್ಷ ಸಾಜಿ ಪಿ.ಆರ್, ಮ್ಯಾನೇಜಿ0ಗ್ ಟ್ರಸ್ಟಿ ನಿತೀಶ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ. ಮನು ಕೆ.ಜೆ ಜೋಸೆಫ್ ಪ್ರಮಾಣ ವಚನ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಡಾ. ಪ್ರವೀಣ್ ಕುಮಾರ್, ಸೌಮ್ಯ ಹೆಚ್.ಆರ್, ಡಾ. ಶ್ರೀಹರಿ, ಡಾ. ವಿದ್ಯಾ ಗೌರಿ, ಸೋಜು ಅಗಸ್ಟೀನ್ ಹಾಗೂ ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಿ.ಆರ್.ಒ ಶ್ರೀಮತಿ ಮಧುರಾ ಸ್ವಾಗತಿಸಿದರು.ಉಪನ್ಯಾಸಕರಾದ ಮೇರ್ಲಿ ನಿರೂಪಿಸಿ, ಪೂಜಾ ರವರು ಅತಿಥಿಯಾದ ಶೆರ್ಲಿ ರವರ ಪರಿಚಯವನ್ನು ಬೋಧಿಸಿ, ವಂದಿಸಿದರು.

Related posts

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya
error: Content is protected !!