September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು.

ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ. ಮೋಹನ್ ಕುಮಾರ್ ನೆರವೇರಿಸಿ ಗ್ರಾಮೀಣ ಪ್ರದೇಶದಲ್ಲಿ, ಪ್ರಶಾಂತವಾದ ವಾತಾವರಣದಲ್ಲಿರುವ ಇಂತಹ
ಶ್ರದ್ದಾ ಕೇಂದ್ರಗಳ ರಕ್ಷಣೆ ಮತ್ತು ಅಭಿವೃದ್ಧಿಯನ್ನು ನಾವುಗಳು ಮಾಡಿದಾಗ ಅದರ ಫಲ ಖಂಡಿತಾ ನಮಗೆ ಸಿಗುತ್ತದೆ. ನಾವೆಲ್ಲರೂ ಪ್ರಕೃತಿ ಆರಾಧಕರೂ. ಪ್ರಕೃತಿಯಲ್ಲಿ ದೇವರನ್ನು ಕಂಡವರು ಎಂದರು‌.

ಅಧ್ಯಕ್ಷತೆಯನ್ನು ಶ್ರೀ ಬಾಂಜಾರು ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ. ಕೃಷ್ಣಪ್ಪ ವಹಿಸಿ ಎಲ್ಲರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ವೆಂಕಟೇಶ್, ಮುಂಡಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್‌ ನಾರಾಯಣ ರಾವ್, ಬೆಳ್ತಂಗಡಿ ಮಲೆಕುಡಿಯರ ಸಂಘ ಅಧ್ಯಕ್ಷ ಶಿವರಾಂ ಎ, ಕೊರಗಪ್ಪ ಗೌಡ ಅರಣೆಪಾದೆ-ಚಾರ್ಮಾಡಿ ಉಪಸ್ಥಿತರಿದ್ದರು. ಸಮಿತಿ ಸದಸ್ಯರು ಸಹಕರಿಸಿದರು.

Related posts

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಕಕ್ಯಪದವು ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ ”ಕ್ವಿಝಾಡ್೯” ವಾಣಿಜ್ಯ ಚಟುವಟಿಕೆ

Suddi Udaya
error: Content is protected !!