25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು.

ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ. ಮೋಹನ್ ಕುಮಾರ್ ನೆರವೇರಿಸಿ ಗ್ರಾಮೀಣ ಪ್ರದೇಶದಲ್ಲಿ, ಪ್ರಶಾಂತವಾದ ವಾತಾವರಣದಲ್ಲಿರುವ ಇಂತಹ
ಶ್ರದ್ದಾ ಕೇಂದ್ರಗಳ ರಕ್ಷಣೆ ಮತ್ತು ಅಭಿವೃದ್ಧಿಯನ್ನು ನಾವುಗಳು ಮಾಡಿದಾಗ ಅದರ ಫಲ ಖಂಡಿತಾ ನಮಗೆ ಸಿಗುತ್ತದೆ. ನಾವೆಲ್ಲರೂ ಪ್ರಕೃತಿ ಆರಾಧಕರೂ. ಪ್ರಕೃತಿಯಲ್ಲಿ ದೇವರನ್ನು ಕಂಡವರು ಎಂದರು‌.

ಅಧ್ಯಕ್ಷತೆಯನ್ನು ಶ್ರೀ ಬಾಂಜಾರು ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ. ಕೃಷ್ಣಪ್ಪ ವಹಿಸಿ ಎಲ್ಲರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ವೆಂಕಟೇಶ್, ಮುಂಡಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್‌ ನಾರಾಯಣ ರಾವ್, ಬೆಳ್ತಂಗಡಿ ಮಲೆಕುಡಿಯರ ಸಂಘ ಅಧ್ಯಕ್ಷ ಶಿವರಾಂ ಎ, ಕೊರಗಪ್ಪ ಗೌಡ ಅರಣೆಪಾದೆ-ಚಾರ್ಮಾಡಿ ಉಪಸ್ಥಿತರಿದ್ದರು. ಸಮಿತಿ ಸದಸ್ಯರು ಸಹಕರಿಸಿದರು.

Related posts

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya
error: Content is protected !!