24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಧರ್ಮಸ್ಥಳ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” ಎಂಬ ಯೂಟ್ಯೂಬರ್ ಹರಿಬಿಟ್ಟಿದ್ದು, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಘನ ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟಿದ್ದ ಸಮೀರ್ ಎಂ.ಡಿ. ದೂತ ಎಂಬ ವ್ಯಕ್ತಿ ಹಾಗೂ ಯೂಟ್ಯೂಬ್ ಚಾನಲ್ ದೂತದ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಹತ್ತು ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಹೂಡಿದ್ದಾರೆ.

ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಹಾಗೂ ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಮಹತ್ವದ ಆದೇಶ ಮಾಡಿದ್ದಾರೆ.

Related posts

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya
error: Content is protected !!