July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಧರ್ಮಸ್ಥಳ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” ಎಂಬ ಯೂಟ್ಯೂಬರ್ ಹರಿಬಿಟ್ಟಿದ್ದು, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಘನ ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟಿದ್ದ ಸಮೀರ್ ಎಂ.ಡಿ. ದೂತ ಎಂಬ ವ್ಯಕ್ತಿ ಹಾಗೂ ಯೂಟ್ಯೂಬ್ ಚಾನಲ್ ದೂತದ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಹತ್ತು ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಹೂಡಿದ್ದಾರೆ.

ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಹಾಗೂ ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಮಹತ್ವದ ಆದೇಶ ಮಾಡಿದ್ದಾರೆ.

Related posts

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ನೀಟ್ ಪರೀಕ್ಷೆಯಲ್ಲಿ ಮೇಲುಗೈ ಸಾಧಿಸಿದ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು – 99.977 ಪರ್ಸೆಂಟೈಲ್(672ಅಂಕ) ಪಡೆದ ಅಕ್ಷಯ್ ಡಿ.-ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!