September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಧರ್ಮಸ್ಥಳ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” ಎಂಬ ಯೂಟ್ಯೂಬರ್ ಹರಿಬಿಟ್ಟಿದ್ದು, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಘನ ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟಿದ್ದ ಸಮೀರ್ ಎಂ.ಡಿ. ದೂತ ಎಂಬ ವ್ಯಕ್ತಿ ಹಾಗೂ ಯೂಟ್ಯೂಬ್ ಚಾನಲ್ ದೂತದ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಹತ್ತು ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಹೂಡಿದ್ದಾರೆ.

ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಹಾಗೂ ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಮಹತ್ವದ ಆದೇಶ ಮಾಡಿದ್ದಾರೆ.

Related posts

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya
error: Content is protected !!