ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವವು ತಹಸೀಲ್ದಾರ್ ಪ್ರಥ್ವಿ ಸಾನಿಕಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಬೆಳ್ತಂಗಡಿ ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್ ಭಾಗವಹಿಸಿದ್ದರು.

ಸಮಾರಂಭದಲ್ಲಿ ದೀಮತಿ ಮಹಿಳಾ ಸಮಾಜ ಉಜಿರೆ ಅಧ್ಯಕ್ಷೆ ಡಾ. ಪಿ ರಜತ ಶೆಟ್ಟಿ ಯವರು ಧಾರ್ಮಿಕ ಉಪನ್ಯಾಸ ನೀಡಿದರು ಬೆಳ್ತಂಗಡಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್ ವಿಜಯಕುಮಾರ್, ತಾಲೂಕಿನ ಇಲಾಖೆಯ ಇಲಾಖಾಧಿಕಾರಿಗಳು, ಸಮಾಜ ಬಾಂಧವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಜಯಾನಂದ ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಪರಮೇಶ್ ತಾಲೂಕು ಕಛೇರಿ ಇವರು ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ನಿರ್ಹಹಣೆ ಮಾಡಿದರು.