29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

ಮಚ್ಚಿನ: “ಮಾಯವಾಗುತ್ತಿದೆ ಮಚ್ಚಿನ ಗ್ರಾಮದ ನೆರೋಲ್ಪಲ್ಕೆ ಬಸ್ ತಂಗುದಾಣ…” ಹೌದು ಮಚ್ಚಿನ ಗ್ರಾಮದ ನೆರೋಲ್ಪಲ್ಕೆ ಯಲ್ಲಿ ಸುಮಾರು ವರ್ಷಗಳ ಹಿಂದೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಗೊಂಡಿದ್ದರೂ ಈಗ ಮಾತ್ರ ಅದು ಜನರಿಗೆ ಉಪಯೋಗಕ್ಕೆ ಇಲ್ಲದಂತಾಗಿದೆ.

ಬಿಸಿಲು, ಗಾಳಿ ಮಳೆಗೆ ಜನರು ಬಸ್ಸಿಗಾಗಿ ರಸ್ತೆ ಬದಿಯ ಮರದ ಅಡಿಯಲ್ಲಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣದ ಸುತ್ತವು ಗಿಡಗಂಟಿ ಪೊದೆಗಳಿಂದ ಮುತ್ತಿಹೋಗಿವೆ. ಈ ಬಸ್ ತಂಗುದಾಣಕ್ಕೆ ಹೋಗಲು ಸರಿಯಾದ ದಾರಿಯು ಇಲ್ಲ ಚರಂಡಿಗಳನ್ನು ತೆಗೆದು ಮೋರಿಯು ಹಾಕದೆ ಚರಂಡಿ ಹಾರಿ ಬಸ್ಸಿಗೆ ಓಡೋ ಸ್ಥಿತಿಯಲ್ಲಿದೆ. ಈ ಸ್ಥಳದಲ್ಲಿ ಸುತ್ತುಮುತ್ತಲು ಹಲವಾರು ಮನೆಗಳಿದ್ದು ಶಾಲಾ ಮಕ್ಕಳು ಬಸ್ಸಿಗಾಗಿ ರಸ್ತೆ ಬದಿಯಲ್ಲಿ ನಿಲ್ಲುವಂತ ಪರಿಸ್ಥಿತಿಯಲ್ಲಿದೆ. ಇನ್ನೇನು ಮಳೆಗಾಲ ಪ್ರಾರಂಭವಾದರೆ ಸಿಡಿಲು ಮಳೆಗೆ ರಸ್ತೆ ಬದಿಯಲ್ಲಿ ನಿಲ್ಲುವಂತಹ ಸ್ಥಿತಿಯಲ್ಲಿದೆ. ರಾತ್ರಿ ಹೊತ್ತು ಸರಿಯಾದ ದಾರಿದೀಪವು ಇಲ್ಲದೆ ಕತ್ತಲೆಯಲ್ಲಿ ಬಸ್ಸಿಗಾಗಿ ಕಾಯುವಂತಾಗಿದೆ. ಇನ್ನಾದರೂ ಜನಪ್ರತಿನಿಧಿಗಳು ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಬಸ್ ನಿಲ್ದಾಣದ ವ್ಯವಸ್ಥೆಯನ್ನು ಒದಗಿಸುವಂತೆ ಸ್ಥಳೀಯ ಗ್ರಾಮಸ್ಥರ ಆಗ್ರಹವಾಗಿದೆ.

ಈ ಭಾಗದ ಸಾರ್ವಜನಿಕ ಬಸ್ ನಿಲ್ದಾಣವು ಎಲ್ಲರಿಗೂ ಅವಶ್ಯವಾಗಿದೆ. ಆದರೆ ಬಸ್ ನಿಲ್ದಾಣಕ್ಕೆ ಹೋಗಲು ಸರಿಯಾದ ದಾರಿ ಇಲ್ಲ. ಬಸ್ ನಿಲ್ದಾಣಕ್ಕೆ ನಾಮಫಲಕ, ಲೈಟ್ ವ್ಯವಸ್ಥೆ ಇನ್ನಿತರ ಎಲ್ಲಾ ಸೌಕರ್ಯಗಳೊಂದಿಗೆ ಒಂದು ಸುಂದರ ಬಸ್ ನಿಲ್ದಾಣ ಮಾಡುವಂತೆ ನಮ್ಮೆಲ್ಲರ ಒತ್ತಾಯ.
-ಅನಂತಕೃಷ್ಣ ಭಟ್ ಕುಕ್ಕಿಲ

Related posts

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!