25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಧರ್ಮಸ್ಥಳ : ಇಲ್ಲಿಯ ಮುಳಿಕ್ಕಾರು ಬೈಲಿನ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತ್ತು.

ಎ.10 ರಂದು ಬೆಳಿಗ್ಗೆ ಮುಳಿಕ್ಕಾರು ನಿಡ್ಲೆ ಮಧ್ಯೆ ಮಾಡಾಂಗಳ್ ಎಂಬಲ್ಲಿ ಹರಿಯುತ್ತಿರುವ ಸಂಪಿಗೆ ನದಿ ಮದ್ಯದಲ್ಲಿರುವ ಬೆರ್ಮೆರ್ ( ನಾಗ ಬ್ರಹ್ಮ) ಸಾನಿಧ್ಯ ದಲ್ಲಿ ನಾಗ ಬ್ರಹ್ಮದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ನಂತರ ಕಲ್ಲಾಜೆ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಪಿಗೆ ನದಿ ತಟದಲ್ಲಿ ವನ ಭೋಜನ ನಡೆಯಿತು. ರಾತ್ರಿ 9 ಗಂಟೆಗೆ ಕಲ್ಲಾಜೆ ಶ್ರೀ ಪಿಲಿ ಚಾಮುಂಡಿ ದೈವಸ್ಥಾನದಿಂದ ದೈವಗಳ ವೈಭವದ ಭಂಡಾರ ಹೊರಟು ಕಾಡಿನ ಮದ್ಯೆ ಇರುವ ನೆಲ್ಲಿಕಟ್ಟೆ ಎಂಬಲ್ಲಿ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಗ್ರಾಮದ ಗುತ್ತಿನರಾರಾರು ಸೇರಿದಂತೆ ದೈವಸ್ಥಾನ ಸಮಿತಿ ಸರ್ವ ಸದಸ್ಯರು, ಊರ ಪ್ರಮುಖರು, ಹಾಗೂ ಊರ, ಪರವೂರ ಭಕ್ತ ಭಾಂದವರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya
error: Content is protected !!