23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಧರ್ಮಸ್ಥಳ : ಇಲ್ಲಿಯ ಮುಳಿಕ್ಕಾರು ಬೈಲಿನ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತ್ತು.

ಎ.10 ರಂದು ಬೆಳಿಗ್ಗೆ ಮುಳಿಕ್ಕಾರು ನಿಡ್ಲೆ ಮಧ್ಯೆ ಮಾಡಾಂಗಳ್ ಎಂಬಲ್ಲಿ ಹರಿಯುತ್ತಿರುವ ಸಂಪಿಗೆ ನದಿ ಮದ್ಯದಲ್ಲಿರುವ ಬೆರ್ಮೆರ್ ( ನಾಗ ಬ್ರಹ್ಮ) ಸಾನಿಧ್ಯ ದಲ್ಲಿ ನಾಗ ಬ್ರಹ್ಮದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ನಂತರ ಕಲ್ಲಾಜೆ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಪಿಗೆ ನದಿ ತಟದಲ್ಲಿ ವನ ಭೋಜನ ನಡೆಯಿತು. ರಾತ್ರಿ 9 ಗಂಟೆಗೆ ಕಲ್ಲಾಜೆ ಶ್ರೀ ಪಿಲಿ ಚಾಮುಂಡಿ ದೈವಸ್ಥಾನದಿಂದ ದೈವಗಳ ವೈಭವದ ಭಂಡಾರ ಹೊರಟು ಕಾಡಿನ ಮದ್ಯೆ ಇರುವ ನೆಲ್ಲಿಕಟ್ಟೆ ಎಂಬಲ್ಲಿ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಗ್ರಾಮದ ಗುತ್ತಿನರಾರಾರು ಸೇರಿದಂತೆ ದೈವಸ್ಥಾನ ಸಮಿತಿ ಸರ್ವ ಸದಸ್ಯರು, ಊರ ಪ್ರಮುಖರು, ಹಾಗೂ ಊರ, ಪರವೂರ ಭಕ್ತ ಭಾಂದವರು ಉಪಸ್ಥಿತರಿದ್ದರು.

Related posts

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!