22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ: ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.


ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ ಕಾರು ಕಳ್ಳತನವಾಗಿದೆ.
ಇವರು ಕಾರನ್ನು ಉಜಿರೆ ಕಾಲೇಜು ರಸ್ತೆಯಲ್ಲಿರುವ ತಮ್ಮ ಅಂಗಡಿಯ ಸಮೀಪದ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ರಾತ್ರಿ ಅಂಗಡಿ ಮುಚ್ಚಿ ಬಂದು ನೋಡಿದಾಗ ನಿಲ್ಲಿಸಿದ್ದ ಕಾರು ನಾಪತ್ತೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಎ.29ರಂದು ಘಟನೆ ನಡೆದಿದ್ದು ಕಾರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಘಟನೆಯ ಬಗ್ಗೆ ಅಬ್ದುಲ್ ಮುತ್ತಲೀಫ್  ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!