23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ: ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.


ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ ಕಾರು ಕಳ್ಳತನವಾಗಿದೆ.
ಇವರು ಕಾರನ್ನು ಉಜಿರೆ ಕಾಲೇಜು ರಸ್ತೆಯಲ್ಲಿರುವ ತಮ್ಮ ಅಂಗಡಿಯ ಸಮೀಪದ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ರಾತ್ರಿ ಅಂಗಡಿ ಮುಚ್ಚಿ ಬಂದು ನೋಡಿದಾಗ ನಿಲ್ಲಿಸಿದ್ದ ಕಾರು ನಾಪತ್ತೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಎ.29ರಂದು ಘಟನೆ ನಡೆದಿದ್ದು ಕಾರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಘಟನೆಯ ಬಗ್ಗೆ ಅಬ್ದುಲ್ ಮುತ್ತಲೀಫ್  ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya
error: Content is protected !!