July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ: ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.


ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ ಕಾರು ಕಳ್ಳತನವಾಗಿದೆ.
ಇವರು ಕಾರನ್ನು ಉಜಿರೆ ಕಾಲೇಜು ರಸ್ತೆಯಲ್ಲಿರುವ ತಮ್ಮ ಅಂಗಡಿಯ ಸಮೀಪದ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ರಾತ್ರಿ ಅಂಗಡಿ ಮುಚ್ಚಿ ಬಂದು ನೋಡಿದಾಗ ನಿಲ್ಲಿಸಿದ್ದ ಕಾರು ನಾಪತ್ತೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಎ.29ರಂದು ಘಟನೆ ನಡೆದಿದ್ದು ಕಾರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಘಟನೆಯ ಬಗ್ಗೆ ಅಬ್ದುಲ್ ಮುತ್ತಲೀಫ್  ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya
error: Content is protected !!