23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

ಬೆಳ್ತಂಗಡಿ: ತುಳುನಾಡಿನ ಸತ್ಯನಾಪುರದ ‘ಸತ್ಯದ ಸಿರಿಗಳ’ ಮೂಲ ಆಲಡೆಯ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್‌ ಸಿರಿಜಾತ್ರೆ ಎ.12ರಂದು ನಡೆಯಿತು.

ಬೆಳಿಗ್ಗೆ ಗಣಹೋಮ, ರುದ್ರಾಭಿಷೇಕ, ಮಹಾಪೂಜೆ, ಶ್ರೀ ನಾಗಬ್ರಹ್ಮರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಪುಣ್ಯಾಹ, ಸ್ಥಳ ಶುದ್ಧಿ, ಕಲಾತತ್ವ ಹೋಮ, ಸರ್ವಪ್ರಾಯಶ್ಚಿತ್ತ, ವೇದಮೂರ್ತಿ ನಾಗಪಾತ್ರಿ ಶ್ರೀ ಸುಬ್ರಹ್ಮಣ್ಯ ಮಧ್ಯಸ್ಥ ಇವರ ನೇತೃತ್ವದಲ್ಲಿ ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಮಧ್ಯಾಹ್ನ ಶ್ರೀ ದೇವರ ಉತ್ಸವ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ, ಮಹಾಪೂಜೆ ಪಲ್ಲಪೂಜೆ, ನಡೆಯಿತು.

ಸಂಜೆ ಕೊಲ್ಲಿ ಶ್ರೀ ದುರ್ಗಾದೇವಿ ಭಜನಾ ಮಂಡಳಿ ಮತ್ತು ಗುರಿಪಳ್ಳ ಶ್ರೀ ಗುರುರಾಘವೆಂದ್ರ ಭಜನಾ ಮಂಡಳಿಯಿಂದ ಭಜನೆ ‘ಭಾವ-ಗಾನ-ಕುಣಿತ ನಡೆಯಿತು.

ರಾತ್ರಿ ಕುಮಾರ ದರ್ಶನ, ದೇವರ ಉತ್ಸವ, ಕಟ್ಟೆಪೂಜೆ “ವಾರ್ಷಿಕ ನಡ್ವಾಲ್ ಸಿರಿಜಾತ್ರೆ”, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಊರ-ಪರವೂರ ಕಲಾವಿದರಿಂದ ಸಾಂಸ್ಕೃತಿಕ ವೈಭವ, ಶ್ರೀ ಸಿದ್ಧಿವಿನಾಯಕ ಕಲಾತಂಡ ಗುರಿಪಳ್ಳ ಅಭಿನಯದ ಕುತೂಹಲಭರಿತ ತುಳು ಹಾಸ್ಯಮಯ ನಾಟಕ “ಕಥೆ ಏರ್ ಬರೆಪೆರ್…? ” ಜರಗಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಪಾಂಡುರಂಗ ಮರಾಠ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್, ಜಾತ್ರೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸದಾನಂದ ಪೂಜಾರಿ, ಜಾತ್ರೋತ್ಸವ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya
error: Content is protected !!