September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ ಕೊಳೆತ ರೀತಿಯಲ್ಲಿ ಚಿರತೆಯೊಂದು ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಾರ್ಕಳ ಮತ್ತು ಬೆಳ್ತಂಗಡಿ ವನ್ಯಜೀವಿ ಇಲಾಖೆ ಅಧಿಕಾರಿಗಳು ತಂಡ ದೌಡಿಯಿಸಿ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶ ಇತ್ತಿಲಪೇಲ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತ ದೇಹ ನಾಲ್ಕು ಕಾಲುಗಳನ್ನು ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು.ಏ.11 ರಂದು ಸಂಜೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಶರ್ಮಿತಾ ಅವರಿಗೆ ಮಾಹಿತಿ ಬಂದಿದ್ದು. ಏ.12 ರಂದು ಬೆಳಗ್ಗೆ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದು. ಕಾರ್ಕಳ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮೃತದೇಹವನ್ನು ವೈದ್ಯರು ಶವಪರೀಕ್ಷೆ ಮಾಡಿ ಅಲ್ಲಿಯೇ ದಫನ ಮಾಡಲಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಪ್ರಕರಣ ದಾಖಲಾಗಲಿದೆ‌.

ಯಾರೋ ದುಷ್ಕರ್ಮಿಗಳು ಚಿರತೆಯ ತಲೆಗೆ ಗುಂಡು ಹಾರಿಸಿ ಸಾಯಿಸಿ ಕಾಲಿನ ಉಗುರುಗಳಿಗಾಗಿ ಕಾಲನ್ನು ತುಂಡರಿಸಿಕೊಂಡು  ಹೋಗಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗುತ್ತಿದೆ.

ಹಲವಾರು ಸಮಯಗಳಿಂದ ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆ ನಡೆಯುತ್ತಿರುವ ಮಾಹಿತಿ ಸಂಬಂಧಪಟ್ಟ ಅಧಿಕಾರಿಗಳಿಗೆ ಇದ್ದರೂ ಸುಮ್ಮನಿದ್ದಾರೆ ಎಂಬುವುದು ಸ್ಥಳೀಯರ ಆರೋಪವಾಗಿದೆ. ಈ ಬಗ್ಗೆ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya
error: Content is protected !!