April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

ನಾಲ್ಕೂರು: ನಾಲ್ಕೂರು ಗ್ರಾಮದ ಸೂಳಬೆಟ್ಟು ಸಾರ್ವಜನಿಕ ರಸ್ತೆಯ ಡೆಪ್ಪುಣಿ ಪ್ರಯಾಣಿಕರ ಬಸ್ ತಂಗುದಾನದ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಎ.12 ರಂದು ಬೆಳಕಿಗೆ ಬಂದಿದೆ.

ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನ ಬಳಿ ಪ್ರತಿನಿತ್ಯ ಹತ್ತು ಹಲವಾರು ವಾಹನನಗಳು, ಪಾದಚಾರಿಗಳು, ನಡೆದುಕೊಂಡು ಹೋಗುವ ಪ್ರಮುಖ ರಸ್ತೆಯಾಗಿದ್ದು ಬದಿಯಲ್ಲಿರುವ ಬಸ್ ತಂಗುದಾನದ ಬದಿಯಲ್ಲಿ ಈ ಕೃತ್ಯ ಎಸಗಿರುವುದು ಸುತ್ತಮುತ್ತಲಿನ ಮನೆಗಳಲ್ಲಿ, ಪಾದಚಾರಿಗಳಲ್ಲಿ, ಸಾರ್ವಜನಿಕರಲ್ಲಿ ಭಯದ ವಾತವಾರಣ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರ ಬಸ್ ತಂಗುದಾನ ಆಶ್ರಯತಾಣವಾಗಿದೆ ಆದರೆ ಇದರ ಸಮೀಪದಲ್ಲಿ ಇಂತಹ ಕೃತ್ಯ ನಡೆಸುತ್ತಿರುವುದು ವಿಪರ್ಯಾಸ. ಈ ಬಗ್ಗೆ ಕಠಿಣ ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ಸಿಸಿ ಕ್ಯಾಮರ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವಾಮಾಚಾರ ಪದೇ ಪದೇ ಈ ಪರಿಸರದಲ್ಲಿ ನಡೆಯುತ್ತಿದ್ದು ಸಾರ್ವಜನಿಕರಿಗೆ ಭಯ ಉಂಟುಮಾಡಿದೆ. ತೆಂಗಿನಕಾಯಿ-ಕುಂಬಳಕಾಯಿ ಸಹಿತ ವಿವಿಧ ವಸ್ತುಗಳ ಮಾರ್ಗ ಬದಿಯಲ್ಲಿ ಸಾರ್ವಜನಿಕರಿಗೆ ಕಾಣಸಿಗುತ್ತಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಕಡಿವಾಣ ಬೀಳಬೇಕು ಎಂದು ಸಾರ್ವಜಿಕರು ಆಗ್ರಹಿಸುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯತ್, ಪೊಲೀಸ್ ಮತ್ತು ಅರಣ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!