23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

ನಾಲ್ಕೂರು: ನಾಲ್ಕೂರು ಗ್ರಾಮದ ಸೂಳಬೆಟ್ಟು ಸಾರ್ವಜನಿಕ ರಸ್ತೆಯ ಡೆಪ್ಪುಣಿ ಪ್ರಯಾಣಿಕರ ಬಸ್ ತಂಗುದಾನದ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಎ.12 ರಂದು ಬೆಳಕಿಗೆ ಬಂದಿದೆ.

ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನ ಬಳಿ ಪ್ರತಿನಿತ್ಯ ಹತ್ತು ಹಲವಾರು ವಾಹನನಗಳು, ಪಾದಚಾರಿಗಳು, ನಡೆದುಕೊಂಡು ಹೋಗುವ ಪ್ರಮುಖ ರಸ್ತೆಯಾಗಿದ್ದು ಬದಿಯಲ್ಲಿರುವ ಬಸ್ ತಂಗುದಾನದ ಬದಿಯಲ್ಲಿ ಈ ಕೃತ್ಯ ಎಸಗಿರುವುದು ಸುತ್ತಮುತ್ತಲಿನ ಮನೆಗಳಲ್ಲಿ, ಪಾದಚಾರಿಗಳಲ್ಲಿ, ಸಾರ್ವಜನಿಕರಲ್ಲಿ ಭಯದ ವಾತವಾರಣ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರ ಬಸ್ ತಂಗುದಾನ ಆಶ್ರಯತಾಣವಾಗಿದೆ ಆದರೆ ಇದರ ಸಮೀಪದಲ್ಲಿ ಇಂತಹ ಕೃತ್ಯ ನಡೆಸುತ್ತಿರುವುದು ವಿಪರ್ಯಾಸ. ಈ ಬಗ್ಗೆ ಕಠಿಣ ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ಸಿಸಿ ಕ್ಯಾಮರ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವಾಮಾಚಾರ ಪದೇ ಪದೇ ಈ ಪರಿಸರದಲ್ಲಿ ನಡೆಯುತ್ತಿದ್ದು ಸಾರ್ವಜನಿಕರಿಗೆ ಭಯ ಉಂಟುಮಾಡಿದೆ. ತೆಂಗಿನಕಾಯಿ-ಕುಂಬಳಕಾಯಿ ಸಹಿತ ವಿವಿಧ ವಸ್ತುಗಳ ಮಾರ್ಗ ಬದಿಯಲ್ಲಿ ಸಾರ್ವಜನಿಕರಿಗೆ ಕಾಣಸಿಗುತ್ತಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಕಡಿವಾಣ ಬೀಳಬೇಕು ಎಂದು ಸಾರ್ವಜಿಕರು ಆಗ್ರಹಿಸುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯತ್, ಪೊಲೀಸ್ ಮತ್ತು ಅರಣ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya
error: Content is protected !!