23.3 C
ಪುತ್ತೂರು, ಬೆಳ್ತಂಗಡಿ
April 13, 2025
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಾಗಿದೆ.
ಕಳೆದ ಮಾ. 29 ರಂದು ಬೆಳಿಗ್ಗೆ ಮುತ್ತಲೀಬ್‌ ಅವರು ತಮ್ಮ KA-70-M-5850 ಆಲ್ಟೋ ಕೆ -10 ಕಾರನ್ನು ಉಜಿರೆ ಗ್ರಾಮದ ಉಜಿರೆ ಕಾಲೇಜು ರಸ್ತೆ ಪಾರ್ಕಿಂಗ್ ಇರುವ ಅವರ ಅಂಗಡಿ ಪಕ್ಕದಲ್ಲಿ ನಿಲ್ಲಿಸಿ, ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ರಾತ್ರಿ 10 ಗಂಟೆಗೆ ಮನೆಗೆ ಹೋಗಲು ಹೋದಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ ಕಾರು ಕಂಡು ಬರಲಿಲ್ಲ ನಂತರ ಕಾರಿನ ಪತ್ತೆಯ ಬಗ್ಗೆ ತನ್ನ ಸ್ನೇಹಿತರಲ್ಲಿ ಹಾಗೂ ಇತರರಲ್ಲಿ ವಿಚಾರಿಸಿದ್ದು ಕಾರು ಪತ್ತೆ ಯಾಗಿರುವುದಿಲ್ಲ ಕಳವು ಮಾಡಿಕೊಂಡು ಹೋದ ಕಾರಿನ ಅಂದಾಜು ಮೌಲ್ಯ 6.50.000/-(ಆರು ಲಕ್ಷದ ಐವತ್ತು ಸಾವಿರ) ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 20/2025 ಕಲಂ 303(1) BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!