27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಾಗಿದೆ.
ಕಳೆದ ಮಾ. 29 ರಂದು ಬೆಳಿಗ್ಗೆ ಮುತ್ತಲೀಬ್‌ ಅವರು ತಮ್ಮ KA-70-M-5850 ಆಲ್ಟೋ ಕೆ -10 ಕಾರನ್ನು ಉಜಿರೆ ಗ್ರಾಮದ ಉಜಿರೆ ಕಾಲೇಜು ರಸ್ತೆ ಪಾರ್ಕಿಂಗ್ ಇರುವ ಅವರ ಅಂಗಡಿ ಪಕ್ಕದಲ್ಲಿ ನಿಲ್ಲಿಸಿ, ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ರಾತ್ರಿ 10 ಗಂಟೆಗೆ ಮನೆಗೆ ಹೋಗಲು ಹೋದಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ ಕಾರು ಕಂಡು ಬರಲಿಲ್ಲ ನಂತರ ಕಾರಿನ ಪತ್ತೆಯ ಬಗ್ಗೆ ತನ್ನ ಸ್ನೇಹಿತರಲ್ಲಿ ಹಾಗೂ ಇತರರಲ್ಲಿ ವಿಚಾರಿಸಿದ್ದು ಕಾರು ಪತ್ತೆ ಯಾಗಿರುವುದಿಲ್ಲ ಕಳವು ಮಾಡಿಕೊಂಡು ಹೋದ ಕಾರಿನ ಅಂದಾಜು ಮೌಲ್ಯ 6.50.000/-(ಆರು ಲಕ್ಷದ ಐವತ್ತು ಸಾವಿರ) ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 20/2025 ಕಲಂ 303(1) BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!