23 C
ಪುತ್ತೂರು, ಬೆಳ್ತಂಗಡಿ
June 3, 2025
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಾಗಿದೆ.
ಕಳೆದ ಮಾ. 29 ರಂದು ಬೆಳಿಗ್ಗೆ ಮುತ್ತಲೀಬ್‌ ಅವರು ತಮ್ಮ KA-70-M-5850 ಆಲ್ಟೋ ಕೆ -10 ಕಾರನ್ನು ಉಜಿರೆ ಗ್ರಾಮದ ಉಜಿರೆ ಕಾಲೇಜು ರಸ್ತೆ ಪಾರ್ಕಿಂಗ್ ಇರುವ ಅವರ ಅಂಗಡಿ ಪಕ್ಕದಲ್ಲಿ ನಿಲ್ಲಿಸಿ, ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ರಾತ್ರಿ 10 ಗಂಟೆಗೆ ಮನೆಗೆ ಹೋಗಲು ಹೋದಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ ಕಾರು ಕಂಡು ಬರಲಿಲ್ಲ ನಂತರ ಕಾರಿನ ಪತ್ತೆಯ ಬಗ್ಗೆ ತನ್ನ ಸ್ನೇಹಿತರಲ್ಲಿ ಹಾಗೂ ಇತರರಲ್ಲಿ ವಿಚಾರಿಸಿದ್ದು ಕಾರು ಪತ್ತೆ ಯಾಗಿರುವುದಿಲ್ಲ ಕಳವು ಮಾಡಿಕೊಂಡು ಹೋದ ಕಾರಿನ ಅಂದಾಜು ಮೌಲ್ಯ 6.50.000/-(ಆರು ಲಕ್ಷದ ಐವತ್ತು ಸಾವಿರ) ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 20/2025 ಕಲಂ 303(1) BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!