September 6, 2026
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಾಗಿದೆ.
ಕಳೆದ ಮಾ. 29 ರಂದು ಬೆಳಿಗ್ಗೆ ಮುತ್ತಲೀಬ್‌ ಅವರು ತಮ್ಮ KA-70-M-5850 ಆಲ್ಟೋ ಕೆ -10 ಕಾರನ್ನು ಉಜಿರೆ ಗ್ರಾಮದ ಉಜಿರೆ ಕಾಲೇಜು ರಸ್ತೆ ಪಾರ್ಕಿಂಗ್ ಇರುವ ಅವರ ಅಂಗಡಿ ಪಕ್ಕದಲ್ಲಿ ನಿಲ್ಲಿಸಿ, ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ರಾತ್ರಿ 10 ಗಂಟೆಗೆ ಮನೆಗೆ ಹೋಗಲು ಹೋದಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ ಕಾರು ಕಂಡು ಬರಲಿಲ್ಲ ನಂತರ ಕಾರಿನ ಪತ್ತೆಯ ಬಗ್ಗೆ ತನ್ನ ಸ್ನೇಹಿತರಲ್ಲಿ ಹಾಗೂ ಇತರರಲ್ಲಿ ವಿಚಾರಿಸಿದ್ದು ಕಾರು ಪತ್ತೆ ಯಾಗಿರುವುದಿಲ್ಲ ಕಳವು ಮಾಡಿಕೊಂಡು ಹೋದ ಕಾರಿನ ಅಂದಾಜು ಮೌಲ್ಯ 6.50.000/-(ಆರು ಲಕ್ಷದ ಐವತ್ತು ಸಾವಿರ) ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 20/2025 ಕಲಂ 303(1) BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!