24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಾಗಿದೆ.
ಕಳೆದ ಮಾ. 29 ರಂದು ಬೆಳಿಗ್ಗೆ ಮುತ್ತಲೀಬ್‌ ಅವರು ತಮ್ಮ KA-70-M-5850 ಆಲ್ಟೋ ಕೆ -10 ಕಾರನ್ನು ಉಜಿರೆ ಗ್ರಾಮದ ಉಜಿರೆ ಕಾಲೇಜು ರಸ್ತೆ ಪಾರ್ಕಿಂಗ್ ಇರುವ ಅವರ ಅಂಗಡಿ ಪಕ್ಕದಲ್ಲಿ ನಿಲ್ಲಿಸಿ, ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ರಾತ್ರಿ 10 ಗಂಟೆಗೆ ಮನೆಗೆ ಹೋಗಲು ಹೋದಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ ಕಾರು ಕಂಡು ಬರಲಿಲ್ಲ ನಂತರ ಕಾರಿನ ಪತ್ತೆಯ ಬಗ್ಗೆ ತನ್ನ ಸ್ನೇಹಿತರಲ್ಲಿ ಹಾಗೂ ಇತರರಲ್ಲಿ ವಿಚಾರಿಸಿದ್ದು ಕಾರು ಪತ್ತೆ ಯಾಗಿರುವುದಿಲ್ಲ ಕಳವು ಮಾಡಿಕೊಂಡು ಹೋದ ಕಾರಿನ ಅಂದಾಜು ಮೌಲ್ಯ 6.50.000/-(ಆರು ಲಕ್ಷದ ಐವತ್ತು ಸಾವಿರ) ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 20/2025 ಕಲಂ 303(1) BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

Suddi Udaya
error: Content is protected !!