25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

ಬೆಳ್ತಂಗಡಿ : ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ.

ಸ್ಥಳೀಯ ನಿವಾಸಿ ರತ್ನ (55) ಎಂಬವರು ಏ.10 ರಂದು 6.30 ಗಂಟೆಯ ಸುಮಾರಿಗೆ ಉಜಿರೆ ಓಡಲ ವ್ಯಾಘ್ರ ಚಾಮುಂಡಿ ದ್ವಾರದ ಬಳಿ ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯ ಸಮೀಪ ಬಂದು ಬೈಕ್ ಅನ್ನು ಚಾಲೂ ಸ್ಥಿತಿಯಲ್ಲಿ ನಿಲ್ಲಿಸಿ ಒಬ್ಬ ಬೈಕ್ ನಿಂದ‌ ಇಳಿದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ. ಕುತ್ತಿಗೆಯಿಂದ‌ ಸರವನ್ನು ಎಳೆದು ತುಂಡರಿಸುವ ವೇಳೆ ಮಹಿಳೆಯ ಕುತ್ತಿಗೆಗೆ ಗಾಯಗಳಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳತನವಾದ ಚಿನ್ನದ ಸರ 33 ಗ್ರಾಂ ತೂಕದ್ದಾಗಿದ್ದು ಇದರ ಮೌಲ್ಯ ಸುಮಾರು ಒಂದೂವರೆ ಲಕ್ಷ ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿರುವುದು ಸ್ಥಳೀಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

Related posts

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya
error: Content is protected !!