September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ: ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.


ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ ಕಾರು ಕಳ್ಳತನವಾಗಿದೆ.
ಇವರು ಕಾರನ್ನು ಉಜಿರೆ ಕಾಲೇಜು ರಸ್ತೆಯಲ್ಲಿರುವ ತಮ್ಮ ಅಂಗಡಿಯ ಸಮೀಪದ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ರಾತ್ರಿ ಅಂಗಡಿ ಮುಚ್ಚಿ ಬಂದು ನೋಡಿದಾಗ ನಿಲ್ಲಿಸಿದ್ದ ಕಾರು ನಾಪತ್ತೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಎ.29ರಂದು ಘಟನೆ ನಡೆದಿದ್ದು ಕಾರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಘಟನೆಯ ಬಗ್ಗೆ ಅಬ್ದುಲ್ ಮುತ್ತಲೀಫ್  ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!