September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಇದರ ನೇತ್ರಾವತಿ ಸಭಾಂಗಣದಲ್ಲಿ ಮಾನ್ವಿ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಧರ್ಮಸ್ಥಳ ಮತ್ತು ಜಿಲ್ಲಾ ಕೃಷಿ ತರಬೇತಿ ಬೆಳ್ತಂಗಡಿ ಇದರ ಸಹಯೋಗದಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾದ ಪ್ರಭಾಕರ್ ಮಯ್ಯ ಇವರು ಸಾವಯವ ಕೃಷಿಯ ಬಗ್ಗೆ , ಕೃಷಿಗೆ ರೋಗಗಳ ನಿಯಂತ್ರಣದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್ ಉಪಸ್ಥಿತರಿದ್ದು ಕೃಷಿ ಇಲಾಖೆಯ ಸೌಲಭ್ಯದ ಬಗ್ಗೆ ತಿಳಿಸಿದರು.


ಉಜಿರೆ ಕೃಷಿ ಸಖಿ ಭಾಗೀರಥಿಯವರು ಅಣಬೆ ಕೃಷಿ ಬಗ್ಗೆ ತರಬೇತಿ ನೀಡಿದರು. ಕೃಷಿ ಸಖಿ ಸುಚೇತಾ ಸ್ವಾಗತಿಸಿ ಅಚ್ಚು ಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಿದರು.
ಒಕ್ಕೂಟದ ಕಾರ್ಯದರ್ಶಿ ವಿಜಯಲಕ್ಷ್ಮಿ, ಪದಾಧಿಕಾರಿಯವರು, ಪಂಚಾಯತ್ ಸಿಬ್ಬಂದಿಗಳಾದ ವಂದನಾ, ಶಿವಾನಂದ ಗ್ರಂಥ ಪಾಲಕಿ ಮಂಜುಳಾ, ಎಮ್.ಬಿ.ಕೆ ಚಂದ್ರಾವತಿ, ಎಲ್ ಸಿ ಆರ ಪಿ ವೀಣಾ, ಪಶುಸಖಿ ಯಶೋದ ಉಪಸ್ಥಿತರಿದ್ದು ಸಹಕರಿಸಿದರು. ಗ್ರಾಮದ ಕೃಷಿಕರು ಮತ್ತು ಮಹಿಳೆಯರು ತರಬೇತಿಯ ಪ್ರಯೋಜನ ಪಡೆದುಕೊಂಡರು.

Related posts

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ವಾಣಿ ಕಾಲೇಜಿನ ಪರಿಸರ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!