27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

ಬೆಳ್ತಂಗಡಿ: ತುಳುನಾಡಿನ ಸತ್ಯನಾಪುರದ ‘ಸತ್ಯದ ಸಿರಿಗಳ’ ಮೂಲ ಆಲಡೆಯ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್‌ ಸಿರಿಜಾತ್ರೆ ಎ.12ರಂದು ನಡೆಯಿತು.

ಬೆಳಿಗ್ಗೆ ಗಣಹೋಮ, ರುದ್ರಾಭಿಷೇಕ, ಮಹಾಪೂಜೆ, ಶ್ರೀ ನಾಗಬ್ರಹ್ಮರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಪುಣ್ಯಾಹ, ಸ್ಥಳ ಶುದ್ಧಿ, ಕಲಾತತ್ವ ಹೋಮ, ಸರ್ವಪ್ರಾಯಶ್ಚಿತ್ತ, ವೇದಮೂರ್ತಿ ನಾಗಪಾತ್ರಿ ಶ್ರೀ ಸುಬ್ರಹ್ಮಣ್ಯ ಮಧ್ಯಸ್ಥ ಇವರ ನೇತೃತ್ವದಲ್ಲಿ ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಮಧ್ಯಾಹ್ನ ಶ್ರೀ ದೇವರ ಉತ್ಸವ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ, ಮಹಾಪೂಜೆ ಪಲ್ಲಪೂಜೆ, ನಡೆಯಿತು.

ಸಂಜೆ ಕೊಲ್ಲಿ ಶ್ರೀ ದುರ್ಗಾದೇವಿ ಭಜನಾ ಮಂಡಳಿ ಮತ್ತು ಗುರಿಪಳ್ಳ ಶ್ರೀ ಗುರುರಾಘವೆಂದ್ರ ಭಜನಾ ಮಂಡಳಿಯಿಂದ ಭಜನೆ ‘ಭಾವ-ಗಾನ-ಕುಣಿತ ನಡೆಯಿತು.

ರಾತ್ರಿ ಕುಮಾರ ದರ್ಶನ, ದೇವರ ಉತ್ಸವ, ಕಟ್ಟೆಪೂಜೆ “ವಾರ್ಷಿಕ ನಡ್ವಾಲ್ ಸಿರಿಜಾತ್ರೆ”, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಊರ-ಪರವೂರ ಕಲಾವಿದರಿಂದ ಸಾಂಸ್ಕೃತಿಕ ವೈಭವ, ಶ್ರೀ ಸಿದ್ಧಿವಿನಾಯಕ ಕಲಾತಂಡ ಗುರಿಪಳ್ಳ ಅಭಿನಯದ ಕುತೂಹಲಭರಿತ ತುಳು ಹಾಸ್ಯಮಯ ನಾಟಕ “ಕಥೆ ಏರ್ ಬರೆಪೆರ್…? ” ಜರಗಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಪಾಂಡುರಂಗ ಮರಾಠ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್, ಜಾತ್ರೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸದಾನಂದ ಪೂಜಾರಿ, ಜಾತ್ರೋತ್ಸವ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya
error: Content is protected !!