22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ ಕೊಳೆತ ರೀತಿಯಲ್ಲಿ ಚಿರತೆಯೊಂದು ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಾರ್ಕಳ ಮತ್ತು ಬೆಳ್ತಂಗಡಿ ವನ್ಯಜೀವಿ ಇಲಾಖೆ ಅಧಿಕಾರಿಗಳು ತಂಡ ದೌಡಿಯಿಸಿ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶ ಇತ್ತಿಲಪೇಲ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತ ದೇಹ ನಾಲ್ಕು ಕಾಲುಗಳನ್ನು ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು.ಏ.11 ರಂದು ಸಂಜೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಶರ್ಮಿತಾ ಅವರಿಗೆ ಮಾಹಿತಿ ಬಂದಿದ್ದು. ಏ.12 ರಂದು ಬೆಳಗ್ಗೆ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದು. ಕಾರ್ಕಳ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮೃತದೇಹವನ್ನು ವೈದ್ಯರು ಶವಪರೀಕ್ಷೆ ಮಾಡಿ ಅಲ್ಲಿಯೇ ದಫನ ಮಾಡಲಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಪ್ರಕರಣ ದಾಖಲಾಗಲಿದೆ‌.

ಯಾರೋ ದುಷ್ಕರ್ಮಿಗಳು ಚಿರತೆಯ ತಲೆಗೆ ಗುಂಡು ಹಾರಿಸಿ ಸಾಯಿಸಿ ಕಾಲಿನ ಉಗುರುಗಳಿಗಾಗಿ ಕಾಲನ್ನು ತುಂಡರಿಸಿಕೊಂಡು  ಹೋಗಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗುತ್ತಿದೆ.

ಹಲವಾರು ಸಮಯಗಳಿಂದ ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆ ನಡೆಯುತ್ತಿರುವ ಮಾಹಿತಿ ಸಂಬಂಧಪಟ್ಟ ಅಧಿಕಾರಿಗಳಿಗೆ ಇದ್ದರೂ ಸುಮ್ಮನಿದ್ದಾರೆ ಎಂಬುವುದು ಸ್ಥಳೀಯರ ಆರೋಪವಾಗಿದೆ. ಈ ಬಗ್ಗೆ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮುಂಡಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಅಡಕೆ ತೋಟ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!