24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

ನಾರಾವಿ: ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ-ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯರಾತ್ರಿ ಎ.12 ರಂದು ನಡೆದಿದೆ.

ಸುಮಾರು ರಾತ್ರಿ 12.15 ಕ್ಕೆ ಗಂಟೆಗೆ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಪುರುಷ ಗುಡ್ಡೆ ಎಂಬಲ್ಲಿ ಕೊಕ್ರಾಡಿ -ನಾರಾವಿ ಸಾರ್ವಜನಿಕ ಡಾಮರು ರಸ್ತೆಯಲ್ಲಿ  ಕೆ ಎ 19 ಇಪಿ 9677 ನೇ ಮೋಟಾರು ಸೈಕಲ್‌ನ್ನು ಅದರ ಸವಾರ ಪ್ರಶಾಂತ ರವರು ತಿರುವು ರಸ್ತೆಯಲ್ಲಿ ನಾರಾವಿ ಕಡೆಯಿಂದ ವೇಣೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲ ಬದಿಗೆ ಸವಾರಿ ಮಾಡಿಕೊಂಡು ಬಂದು ರಸ್ತೆಯ ಬಲ ಬದಿಯಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರಶಾಂತ್ ಮತ್ತು ಸಹ ಸವಾರ ದಿನೇಶ ರವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!