September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

ನಾರಾವಿ: ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ-ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯರಾತ್ರಿ ಎ.12 ರಂದು ನಡೆದಿದೆ.

ಸುಮಾರು ರಾತ್ರಿ 12.15 ಕ್ಕೆ ಗಂಟೆಗೆ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಪುರುಷ ಗುಡ್ಡೆ ಎಂಬಲ್ಲಿ ಕೊಕ್ರಾಡಿ -ನಾರಾವಿ ಸಾರ್ವಜನಿಕ ಡಾಮರು ರಸ್ತೆಯಲ್ಲಿ  ಕೆ ಎ 19 ಇಪಿ 9677 ನೇ ಮೋಟಾರು ಸೈಕಲ್‌ನ್ನು ಅದರ ಸವಾರ ಪ್ರಶಾಂತ ರವರು ತಿರುವು ರಸ್ತೆಯಲ್ಲಿ ನಾರಾವಿ ಕಡೆಯಿಂದ ವೇಣೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲ ಬದಿಗೆ ಸವಾರಿ ಮಾಡಿಕೊಂಡು ಬಂದು ರಸ್ತೆಯ ಬಲ ಬದಿಯಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರಶಾಂತ್ ಮತ್ತು ಸಹ ಸವಾರ ದಿನೇಶ ರವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!