23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

ನಾಲ್ಕೂರು: ನಾಲ್ಕೂರು ಗ್ರಾಮದ ಸೂಳಬೆಟ್ಟು ಸಾರ್ವಜನಿಕ ರಸ್ತೆಯ ಡೆಪ್ಪುಣಿ ಪ್ರಯಾಣಿಕರ ಬಸ್ ತಂಗುದಾನದ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಎ.12 ರಂದು ಬೆಳಕಿಗೆ ಬಂದಿದೆ.

ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನ ಬಳಿ ಪ್ರತಿನಿತ್ಯ ಹತ್ತು ಹಲವಾರು ವಾಹನನಗಳು, ಪಾದಚಾರಿಗಳು, ನಡೆದುಕೊಂಡು ಹೋಗುವ ಪ್ರಮುಖ ರಸ್ತೆಯಾಗಿದ್ದು ಬದಿಯಲ್ಲಿರುವ ಬಸ್ ತಂಗುದಾನದ ಬದಿಯಲ್ಲಿ ಈ ಕೃತ್ಯ ಎಸಗಿರುವುದು ಸುತ್ತಮುತ್ತಲಿನ ಮನೆಗಳಲ್ಲಿ, ಪಾದಚಾರಿಗಳಲ್ಲಿ, ಸಾರ್ವಜನಿಕರಲ್ಲಿ ಭಯದ ವಾತವಾರಣ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರ ಬಸ್ ತಂಗುದಾನ ಆಶ್ರಯತಾಣವಾಗಿದೆ ಆದರೆ ಇದರ ಸಮೀಪದಲ್ಲಿ ಇಂತಹ ಕೃತ್ಯ ನಡೆಸುತ್ತಿರುವುದು ವಿಪರ್ಯಾಸ. ಈ ಬಗ್ಗೆ ಕಠಿಣ ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ಸಿಸಿ ಕ್ಯಾಮರ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವಾಮಾಚಾರ ಪದೇ ಪದೇ ಈ ಪರಿಸರದಲ್ಲಿ ನಡೆಯುತ್ತಿದ್ದು ಸಾರ್ವಜನಿಕರಿಗೆ ಭಯ ಉಂಟುಮಾಡಿದೆ. ತೆಂಗಿನಕಾಯಿ-ಕುಂಬಳಕಾಯಿ ಸಹಿತ ವಿವಿಧ ವಸ್ತುಗಳ ಮಾರ್ಗ ಬದಿಯಲ್ಲಿ ಸಾರ್ವಜನಿಕರಿಗೆ ಕಾಣಸಿಗುತ್ತಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಕಡಿವಾಣ ಬೀಳಬೇಕು ಎಂದು ಸಾರ್ವಜಿಕರು ಆಗ್ರಹಿಸುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯತ್, ಪೊಲೀಸ್ ಮತ್ತು ಅರಣ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!