25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

ನಾಲ್ಕೂರು: ನಾಲ್ಕೂರು ಗ್ರಾಮದ ಸೂಳಬೆಟ್ಟು ಸಾರ್ವಜನಿಕ ರಸ್ತೆಯ ಡೆಪ್ಪುಣಿ ಪ್ರಯಾಣಿಕರ ಬಸ್ ತಂಗುದಾನದ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಎ.12 ರಂದು ಬೆಳಕಿಗೆ ಬಂದಿದೆ.

ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನ ಬಳಿ ಪ್ರತಿನಿತ್ಯ ಹತ್ತು ಹಲವಾರು ವಾಹನನಗಳು, ಪಾದಚಾರಿಗಳು, ನಡೆದುಕೊಂಡು ಹೋಗುವ ಪ್ರಮುಖ ರಸ್ತೆಯಾಗಿದ್ದು ಬದಿಯಲ್ಲಿರುವ ಬಸ್ ತಂಗುದಾನದ ಬದಿಯಲ್ಲಿ ಈ ಕೃತ್ಯ ಎಸಗಿರುವುದು ಸುತ್ತಮುತ್ತಲಿನ ಮನೆಗಳಲ್ಲಿ, ಪಾದಚಾರಿಗಳಲ್ಲಿ, ಸಾರ್ವಜನಿಕರಲ್ಲಿ ಭಯದ ವಾತವಾರಣ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರ ಬಸ್ ತಂಗುದಾನ ಆಶ್ರಯತಾಣವಾಗಿದೆ ಆದರೆ ಇದರ ಸಮೀಪದಲ್ಲಿ ಇಂತಹ ಕೃತ್ಯ ನಡೆಸುತ್ತಿರುವುದು ವಿಪರ್ಯಾಸ. ಈ ಬಗ್ಗೆ ಕಠಿಣ ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ಸಿಸಿ ಕ್ಯಾಮರ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವಾಮಾಚಾರ ಪದೇ ಪದೇ ಈ ಪರಿಸರದಲ್ಲಿ ನಡೆಯುತ್ತಿದ್ದು ಸಾರ್ವಜನಿಕರಿಗೆ ಭಯ ಉಂಟುಮಾಡಿದೆ. ತೆಂಗಿನಕಾಯಿ-ಕುಂಬಳಕಾಯಿ ಸಹಿತ ವಿವಿಧ ವಸ್ತುಗಳ ಮಾರ್ಗ ಬದಿಯಲ್ಲಿ ಸಾರ್ವಜನಿಕರಿಗೆ ಕಾಣಸಿಗುತ್ತಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಕಡಿವಾಣ ಬೀಳಬೇಕು ಎಂದು ಸಾರ್ವಜಿಕರು ಆಗ್ರಹಿಸುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯತ್, ಪೊಲೀಸ್ ಮತ್ತು ಅರಣ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya
error: Content is protected !!