23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಾಗಿದೆ.
ಕಳೆದ ಮಾ. 29 ರಂದು ಬೆಳಿಗ್ಗೆ ಮುತ್ತಲೀಬ್‌ ಅವರು ತಮ್ಮ KA-70-M-5850 ಆಲ್ಟೋ ಕೆ -10 ಕಾರನ್ನು ಉಜಿರೆ ಗ್ರಾಮದ ಉಜಿರೆ ಕಾಲೇಜು ರಸ್ತೆ ಪಾರ್ಕಿಂಗ್ ಇರುವ ಅವರ ಅಂಗಡಿ ಪಕ್ಕದಲ್ಲಿ ನಿಲ್ಲಿಸಿ, ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ರಾತ್ರಿ 10 ಗಂಟೆಗೆ ಮನೆಗೆ ಹೋಗಲು ಹೋದಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ ಕಾರು ಕಂಡು ಬರಲಿಲ್ಲ ನಂತರ ಕಾರಿನ ಪತ್ತೆಯ ಬಗ್ಗೆ ತನ್ನ ಸ್ನೇಹಿತರಲ್ಲಿ ಹಾಗೂ ಇತರರಲ್ಲಿ ವಿಚಾರಿಸಿದ್ದು ಕಾರು ಪತ್ತೆ ಯಾಗಿರುವುದಿಲ್ಲ ಕಳವು ಮಾಡಿಕೊಂಡು ಹೋದ ಕಾರಿನ ಅಂದಾಜು ಮೌಲ್ಯ 6.50.000/-(ಆರು ಲಕ್ಷದ ಐವತ್ತು ಸಾವಿರ) ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 20/2025 ಕಲಂ 303(1) BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!